ಶಿವಕುಮಾರ ಸ್ವಾಮೀಜಿ ಜಗತ್ತು ಕಂಡ ಜ್ಞಾನ ಭಂಡಾರ: ಮಾಜಿ ಪ್ರಧಾನಿ ದೇವೇಗೌಡ

Update: 2019-01-21 12:25 GMT
ಫೈಲ್ ಚಿತ್ರ

ಬೆಂಗಳೂರು, ಜ. 21: ಕಲಿಯುಗದ ನಡೆದಾಡುವ ದೇವರು ಎಂದೇ ಹೆಸರಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಅಗಲಿಕೆಯಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.

ನಮ್ಮೆಲ್ಲರ ಆರಾಧ್ಯ ದೈವ ಶಿವಕುಮಾರ ಸ್ವಾಮೀಜಿ ಜಗತ್ತು ಕಂಡ ಜ್ಞಾನ ಭಂಡಾರ. ಶ್ರೀಗಳು ಸಿದ್ದಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕರು. ಶ್ರೀಗಳ ಸಾನಿಧ್ಯದಲ್ಲಿ ಬೆಳೆದ ಅನೇಕ ವಿದ್ಯಾರ್ಥಿಗಳು ಈ ದಿನ ಉನ್ನತ ಮಟ್ಟಕ್ಕೆ ಬೆಳೆದಿದ್ದಾರೆ. ಕಾಯಕ ಯೋಗಿ ಶಿವಕುಮಾರ ಸ್ವಾಮಿ ಈ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ.

ಶ್ರೀಗಳ ಆದರ್ಶ ನಮ್ಮೊಡನೆ ಎಂದೆಂದಿಗೂ ಅಜರಾಮರವಾಗಿರುತ್ತದೆ. ಶ್ರೀಗಳು ಜನಿಸಿದ ಈ ಪುಣ್ಯಭೂಮಿಯಲ್ಲಿ ನಾವೆಲ್ಲ ಜನಿಸಿರುವುದೇ ನಮ್ಮ ಅದೃಷ್ಟ. ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ನಾವೆಲ್ಲ ಮುಂದೆ ಸಾಗಬೇಕಾಗಿದೆ. ನಮ್ಮೆಲ್ಲರ ಆರಾಧ್ಯ ದೈವ ಶಿವಕುಮಾರಸ್ವಾಮಿಗಳ ಆಶೀರ್ವಾದ ಈ ಜಗತ್ತಿಗೆ ಸದಾಕಾಲ ಇರುತ್ತದೆ ಎಂದು ದೇವೇಗೌಡ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News