ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್ ಅಮಾನತು

Update: 2019-01-21 13:05 GMT
ಶಾಸಕ ಜೆ.ಎನ್.ಗಣೇಶ್

ಬೆಂಗಳೂರು, ಜ. 21: ರೆಸಾರ್ಟ್‌ನಲ್ಲಿ ಶಾಸಕ ಆನಂದ್‌ ಸಿಂಗ್ ಮೇಲಿನ ಹಲ್ಲೆ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ.

ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವಿಚಾರಣೆ ನಡೆಸಲು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಅವರನ್ನೊಳಗೊಂಡಂತೆ ವಿಶೇಷ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ತನಿಖಾ ವರದಿಯನ್ನು ಅತ್ಯಂತ ಶೀಘ್ರವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.

ರೆಸಾರ್ಟ್‌ನಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಪ್ರಾಥಮಿಕ ವಿಚಾರಣೆ ನಡೆಸಿ, ಕೂಲಂಕಷವಾಗಿ ಮಾಹಿತಿಯನ್ನು ಸಂಗ್ರಹಿಸಿದ್ದು, ಈ ಬಗ್ಗೆ ಶಾಸಕ ಆನಂದ್ ಸಿಂಗ್ ಜತೆ ಮಾತನಾಡಿ ಘಟನೆ ವಿವರ ಪಡೆದುಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News