ರೆಸಾರ್ಟ್‌ನಲ್ಲಿ ಹೊಡೆದಾಟ ಪ್ರಕರಣ: ಶಾಸಕ ಆನಂದ್ ಸಿಂಗ್ ಬಲಗಣ್ಣಿಗೆ ಪೆಟ್ಟು

Update: 2019-01-21 14:04 GMT

ಬೆಂಗಳೂರು, ಜ. 21: ರೆಸಾರ್ಟ್‌ನಲ್ಲಿ ಶಾಸಕರಾದ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ಹೊಡೆದಾಟ ಮಾಡಿಕೊಂಡ ಘಟನೆ ಕೊನೆಗೂ ಬಹಿರಂಗವಾಗಿದ್ದು, ಶಾಸಕ ಆನಂದ್ ಸಿಂಗ್ ಅವರ ಬಲಗಣ್ಣಿಗೆ ಬಲವಾದ ಪೆಟ್ಟು ತಗುಲಿರುವ ಫೋಟೋಗಳು ಮಾಧ್ಯಮಗಳಿಗೆ ಲಭಿಸಿವೆ.

ಜ.19ರ ಶನಿವಾರ ಶಾಸಕಾಂಗ ಪಕ್ಷದ ಸಭೆ ಬಳಿಕ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರೆಲ್ಲರೂ ಪಾರ್ಟಿ ಮಾಡಿದ್ದು, ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ಒಂದು ಹಂತದಲ್ಲಿ ಗಣೇಶ್, ಆನಂದ್ ಸಿಂಗ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಸಿಂಗ್ ಅವರ ಬಲಗಣ್ಣಿಗೆ ಬಲವಾದ ಪೆಟ್ಟು ತಗುಲಿದೆ. ಆ ಹಿನ್ನೆಲೆಯಲ್ಲಿ ಅವರು ಇಲ್ಲಿನ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಸಕ ಆನಂದ್ ಸಿಂಗ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಲಗಣ್ಣಿಗೆ ಪೆಟ್ಟು ತಗುಲಿದ್ದು, ಶೀಘ್ರದಲ್ಲೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News