ಕಾರವಾರ ದೋಣಿ ದುರಂತ: ಸಿಎಂ ಕುಮಾರಸ್ವಾಮಿ ಸಂತಾಪ

Update: 2019-01-21 15:39 GMT

ಬೆಂಗಳೂರು,ಜ.21: ಉತ್ತರ ಕನ್ನಡದ ಸಾಗರ ದರ್ಶನ ಸಮೀಪ ಇಂದು ಸಂಭವಿಸಿದ ದೋಣಿ ದುರಂತ ನನ್ನ ಮನ ಕಲಕಿದೆ. ತಕ್ಷಣವೇ ಸೂಕ್ತ ಪರಿಹಾರ ಕ್ರಮಗಳನ್ನು ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರ ಜೊತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ದೇವರು ಈ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News