ಕೃಷಿಕ ರಾಮಚಂದ್ರ ಶೆಟ್ಟಗಾರ್ ನಿಧನ

Update: 2019-01-21 17:50 GMT

ಬಂಟ್ವಾಳ, ಜ. 21: ವಿಟ್ಲ ಪಡ್ನೂರು ಗ್ರಾಮದ ಪೂರ್ಲುಪ್ಪಾಡಿ ನಿವಾಸಿ ರಾಮಚಂದ್ರ ಶೆಟ್ಟಗಾರ್ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ಮುಂಬೈ ವಿದ್ಯುತ್ ಸರಬರಾಜು ವಿಭಾಗದಲ್ಲಿ ಇಂಜಿನಿಯರ್ ಆಗಿದ್ದ ಇವರು, ಸ್ವಯಂ ನಿವೃತ್ತಿ ಪಡೆದು ಕೃಷಿಕರಾಗಿದ್ದರು. ವಿಟ್ಲ ಗ್ರಾಮೀಣ ಬ್ಯಾಂಕಿನಲ್ಲಿ ಎರಡು ಅವಧಿಗೆ ನಿರ್ದೇಶಕರಾಗಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಮೃತರು ಪತ್ನಿ, ಮೂವರು ಪುತ್ರರನ್ನು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News