ಸಿದ್ಧಗಂಗಾ ಶ್ರೀ ನಿಧನ: ಕೆಎಸ್ಸಾರ್ಟಿಸಿಯಿಂದ ಬಸ್ ವ್ಯವಸ್ಥೆ

Update: 2019-01-21 16:13 GMT

ಬೆಂಗಳೂರು, ಜ. 21: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ತುಮಕೂರು ನಗರದಲ್ಲಿ ಎಪಿಎಂಸಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಜೂನಿಯರ್ ಕಾಲೇಜ್‌ನಿಂದ ಸಿದ್ಧಗಂಗಾ ಮಠಕ್ಕೆ 100ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಎಸ್ಸಾರ್ಟಿಸಿಯಿಂದ ವಿವಿಧ ಜಿಲ್ಲೆಗಳಿಂದ ತುಮಕೂರಿಗೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸುಗಳು ಕಲ್ಪಿಸಿದ್ದು, ಸದರಿ ಬಸ್ಸುಗಳು ಇಂದು ಮತ್ತು ನಾಳೆ ಕಾರ್ಯಚರಣೆ ನಡೆಸಲಿವೆ ಎಂದು ಕೆಎಸ್ಸಾರ್ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News