ಮಂಗನ ಕಾಯಿಲೆ: ಮಣಿಪಾಲ ಆಸ್ಪತ್ರೆಗೆ ರಘುಪತಿ ಭಟ್ ಭೇಟಿ

Update: 2019-01-21 17:00 GMT

ಉಡುಪಿ, ಜ.21: ಉಡುಪಿ ಶಾಸಕ ಕೆ.ರಘುಪತಿ ಭಟ್ ಸೋಮವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ತೆರಳಿ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಂತರ ಶಾಸಕರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ವೈದ್ಯರು ಹಾಗೂ ಸಿಬ್ಬಂದಿಗಳ ಜೊತೆ ಚರ್ಚಿಸಿದರು. ರೋಗಿಗಳಿಗೆ ಯಾವುದೇ ತೊಡಕುಂಟಾಗದಂತೆ ನೋಡಿಕೊಳ್ಳಬೇಕು. ಸರಕಾರದ ವತಿಯಿಂದ ಯಾವುದೇ ಸಹಕಾರಕ್ಕೂ ನಾವು ಸಿದ್ದರಿದ್ದೇವೆ. ರೋಗಿಗಳ ಸಂಬಂಧಿಕರಿಗೆ ಇಂದಿರಾ ಕ್ಯಾಂಟೀನ್‌ನಿಂದಲೇ ಆಹಾರ ಒದಗಿಸಬೇಕು ಎಂದು ಶಾಸಕರು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News