ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-01-21 17:12 GMT

ಬೈಂದೂರು, ಜ.21: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಜ.20ರಂದು ತಡರಾತ್ರಿ 11.50ರ ಸುಮಾರಿಗೆ ಶಿರೂರು  ಶಾಲೆ ಸಮೀಪದ ರೈಲ್ವೆ ಟನಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಶಿರೂರು ಬುಕಾರಿ ಕಾಲನಿ ನಿವಾಸಿ ರಾಶಿದ್ ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಶಿರೂರು ಕಡೆಗೆ ಬರುತ್ತಿದ್ದ ಬೈಕಿಗೆ ಬೈಂದೂರು ಕಡೆಗೆ ಹೋಗುತ್ತಿದ್ದ ಮಾರುತಿ ಶಿಫ್ಟ್ ಕಾರು ಢಿಕ್ಕಿ ಹೊಡೆಯಿತೆ ನ್ನಲಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡ ರಾಶಿದ್ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News