ಸಿದ್ದಗಂಗಾ ಶ್ರೀ ನಿಧನ ಹಿನ್ನಲೆ: ಮೈಸೂರು ಅರಮನೆ ಪ್ರವೇಶಕ್ಕೆ ನಿರ್ಬಂಧ

Update: 2019-01-21 17:29 GMT

ಮೈಸೂರು,ಜ.21: ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನದ ಹಿನ್ನಲೆಯಲ್ಲಿ ಜ.22 ರಂದು ಮೈಸೂರು ಅರಮನೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ತಿಳಿಸಿದ್ದಾರೆ.

ನಾಳೆ ಸರ್ಕಾರಿ ರಜೆ ಘೋಷಿಸಿರುವ ಹಿನ್ನಲೆಯಲ್ಲಿ ಒಂದು ದಿನ ಅರಮನೆ ಪ್ರವೇಶ ಸ್ಥಗಿತಗೊಳಿಸಲಾಗಿದ್ದು, ಮೂರು ದಿನ ಅರಮನೆಯಲ್ಲಿ ಸಂಜೆ ವೇಳೆ ನಡೆಯುವ ಧ್ವನಿ ಮತ್ತು ಬೆಳಕನ್ನು ನಿರ್ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News