ಸಿಪಿಐ ಮುಖಂಡ ಕೆ.ಈಶ್ವರ್ ನಿಧನ
Update: 2019-01-21 18:02 GMT
ಬಂಟ್ವಾಳ, ಜ. 21: ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ)ನ ಜಿಲ್ಲಾ ಮುಖಂಡ, ಕಾರ್ಮಿಕ ಮುಂದಾಳು, ಬಿ.ಸಿ.ರೋಡು ಕೊಡಂಗೆ ನಿವಾಸಿ ಕೆ.ಈಶ್ವರ್ (58) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಿಪಿಐ ಹಾಗೂ ಎಐಟಿಯುಸಿ ಯ ಜಿಲ್ಲಾ ಮಂಡಳಿ ಸದಸ್ಯರಾಗಿ, ಪ್ರಸ್ತುತ ಪಾಣೆಮಂಗಳೂರು ಫಿರ್ಕಾ ಬೀಡಿ ಆ್ಯಂಡ್ ಜನರಲ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ಇದರ ಉಪಾಧ್ಯಕ್ಷರಾಗಿ ಬೀಡಿ ಸಂಘಟನೆಯ ಪೂರ್ಣಕಾಲಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಹಿಂದೆ ಅಖಿಲ ಭಾರತ ಯುವಜನ ಫೆಡರೇಶನ್(ಎಐವೈಎಫ್)ನ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಹಂಚಿನ ಕೆಲಸಗಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.