ವೈಮಾನಿಕ ಪ್ರದರ್ಶನ ಹಿನ್ನೆಲೆ: ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲು ಸೂಚನೆ

Update: 2019-01-21 18:25 GMT

ಬೆಂಗಳೂರು, ಜ.21: ನಗರದಲ್ಲಿ ಫೆಬ್ರವರಿ ಆರಂಭವಾಗುವ ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಂಟಿ ತಪಾಸಣೆ ನಡೆಸುವಂತೆ ಲೋಕೋಪಯೋಗಿ, ಅರಣ್ಯ ಇಲಾಖೆ ಹಾಗೂ ಬೆಸ್ಕಾಂಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ಫೆಬ್ರವರಿ 21ರಿಂದ ಆರಂಭವಾಗಲಿರುವ 5 ದಿನಗಳ ಏರೋ ಶೋಗೂ ಮೊದಲೇ ಪರ್ಯಾಯ ಮಾರ್ಗಗಳನ್ನು ಕಲ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಬೇಗೂರು, ಹೆಣ್ಣೂರು, ಬಾಗಲೂರು ಹಾಗೂ ಮೈಲನಹಳ್ಳಿ ಮಾರ್ಗದಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದ್ದು, ರಸ್ತೆ ವಿಸ್ತರಣೆ ಮಾಡಲಾಗಿದೆ. ಬಾಗಲೂರುವರೆಗಿನ ರಸ್ತೆ ಬಿಬಿಎಂಪಿ ವ್ಯಾಪ್ತಿಗೆ ಬರಲಿದ್ದು, ನಂತರದ ಮಾರ್ಗವು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರಲಿದೆ. ರಸ್ತೆಯಲ್ಲಿ ಎರಡು ಮರಗಳನ್ನು ಕತ್ತರಿಸಿ ಕೇಬಲ್ ಅಳವಡಿಸಲು ಅರಣ್ಯ ಇಲಾಖೆಯ ಅನುಮತಿ ಬೇಕಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News