ಸಿದ್ದಗಂಗಾ ಶ್ರೀಗಳ ಸಾಧನೆ, ವೆಶಿಷ್ಟಗಳು

Update: 2019-01-22 11:38 GMT

ಮಹಾ ಶರಣ, ಕಾಯಕ ಯೋಗಿ ಸಿದ್ದಗಂಗಾ ಡಾ. ಶಿವಕುಮಾರ ಶ್ರೀಗಳು ಇಂದು ನಿಧನರಾಗಿದ್ದಾರೆ. ಆದರೆ ಅವರ ಕೆಲಸ, ಅವರ ಪ್ರವಚನಗಳು ಈಗಲೂ ನಮ್ಮ ಕಣ್ಣ ಮುಂದಿದೆ. ಹೀಗಾಗಿ ಶ್ರೀಗಳ 111 ಸಾಧನೆ, ವೈಶಿಷ್ಟ್ಯಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

1937:1917ರಲ್ಲಿ ಪ್ರಾರಂಭವಾದ ಸಂಸ್ಕೃತ ಪಾಠ ಶಾಲೆಯನ್ನು ಕಾಲೇಜಾಗಿ ಪರಿವರ್ತಿಸಿದರು.

1944: ತುಮಕೂರು ನಗರದಲ್ಲಿ ಸಿದ್ದಗಂಗಾ ಪ್ರೌಢ ಶಾಲೆ ಆರಂಭ.

1949: ಜೂ.18ರಂದು ಶ್ರೀಸಿದ್ದಲಿಂಗೇಶ್ವರರ ಸಂಸ್ಕೃತ ಮತ್ತು ವೇದಪಾಠ ಶಾಲೆ ರಜತಮಹೋತ್ಸವ.

1950: ಧರ್ಮಸ್ಥಳದ ಶ್ರೀಮಂಜಯ್ಯ ಹೆಗ್ಗಡೆಯವರಿಂದ ಮಹಾ ನಡಾವಳಿ ಉತ್ಸವದಲ್ಲಿ ಗೌರವ ಸ್ವೀಕಾರ.

1951: ಶ್ರೀಗಳಿಂದ ಪ್ರಭುಲಿಂಗ ಲೀಲೆ ಪ್ರವಚನ ಪ್ರಭುಲಿಂಗ ಲೀಲೆಯ ತತ್ವಸಾರಾಂಶಗಳನ್ನು ಪ್ರಚಾರ ಪಡಿಸಿದ ಮೊದಲ ಹೆಜ್ಜೆ.

1954: ಶ್ರೀಕ್ಷೇತ್ರದ ಹಳೆಯ ವಿದ್ಯಾರ್ಥಿಗಳ ಸಂಘ ಸ್ಥಾಪನೆ.

1955: ಶ್ರೀ ಕ್ಷೇತ್ರದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಪ್ರೌಢಶಾಲೆ ಸ್ಥಾಪನೆ.

1956: ಸಿದ್ದಗಂಗಾ ಉಪಧ್ಯಾಯ ಶಿಕ್ಷಣ ತರಬೇತಿ ಸಂಸ್ಥೆ ಸ್ಥಾಪನೆ.

1956: ಶ್ರೀಕ್ಷೇತ್ರದಲ್ಲಿ ಸಂಸ್ಕೃತ ಕಾಲೇಜು ಕಟ್ಟಡ ನಿರ್ಮಾಣ.

1960: ಶ್ರೀಮಠದಲ್ಲಿ ಸಾರ್ವಜನಿಕ ವಿದ್ಯಾರ್ಥಿನಿಲಯ ನಿರ್ಮಾಣ ಆರಂಭ.

1962: ಧರ್ಮಸ್ಥಳದಲ್ಲಿ ನಡೆದ ವಿಶ್ವ ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಇಡೀ ವಿಶ್ವವೇ ಮೆಚ್ಚುವಂತೆ ಪ್ರವಚನ ನೀಡಿದ್ದ ಶ್ರೀಗಳು.

1962: ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸ್ಥಾಪನೆ.

1963: ಜಾತ್ರೆಯಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಆರಂಭ ಹಾಗೂ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ.

1963: ತುಮಕೂರಿನಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ಪ್ರಾರಂಭ.

1963: 44ನೇ ಅಖಿಲ ಕರ್ನಾಟಕ ಸಾಹಿತ್ಯ ಸಮ್ಮೇಳನ ಶ್ರೀಮಠದಲ್ಲಿ ನಡೆದಿದ್ದು, ಶ್ರೀಗಳು ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದರು. ರಂ.ಶ್ರೀ ಮುಗಳಿ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು.

1965: ಶ್ರೀಮಠದಲ್ಲಿ ಕನ್ನಡ ಪಂಡಿತ ತರಗತಿ ಸ್ಥಾಪನೆ.

1965: ಸಿದ್ದಗಂಗಾ ತ್ರೈಮಾಸಿಕ ಪತ್ರಿಕೆ ಆರಂಭ.

1966: ತುಮಕೂರಿನಲ್ಲಿ ಸಿದ್ದಗಂಗಾ ಕಲಾ ವಾಣಿಜ್ಯ ವಿಜ್ಞಾನ ಕಾಲೇಜು ಸ್ಥಾಪನೆ.

1967: ಸಂಜೆ ಕಾಲೇಜು ಸ್ಥಾಪನೆ ಬೆಳಗ್ಗೆ ಕೆಲಸ ಮಾಡಿ, ಸಂಜೆ ಓದು. ಆಸ್ತಕ ವಿದ್ಯಾರ್ಥಿ ಅನುಕೂಲವಾಗುವ ರೀತಿಯಲ್ಲಿ ಸ್ಥಾಪನೆ.

1968: ಬಸವ ಕಲ್ಯಾಣದಲ್ಲಿ ನಡೆದ ಬಸವೇಶ್ವರರ ಅಷ್ಟ ಶತಮಾನೋತ್ಸವದ ಅಧ್ಯಕ್ಷತೆ, ಬಸವಣ್ಣರ ಮಹಾತತ್ವ ಸಾರಿದ ಶ್ರೀಗಳು ದೇಶದ ಮೂಲೆ ಮೂಲೆಯಿಂದ ಆಗಮಿಸಿದ್ದ ಭಕ್ತರು.

1969: ಮುಂಬೈನಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಅಧಿವೇಶನದ ಅಧ್ಯಕ್ಷತೆ.

1969: ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಸಮಾವೇಶದಲ್ಲಿ ನೇತೃತ್ವ, ಹಿಂದೂಧರ್ಮದ ಜಾಗೃತಿಯಲ್ಲಿ ಭಾಗಿ.

1970: ಡಿ.27 ಬೆಂಗಳೂರಿನಲ್ಲಿ ನಡೆದ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ.

1972: ಮೇ.26 ಶ್ರೀಮಠದ ಪೀಠಾಧಿಕಾರ ಸ್ವೀಕಾರದ ರಜತ ಮಹೋತ್ಸವ. ಮುದ್ರಣಾಲಯ ಪ್ರಾರಂಭ

1972: ಮೇ 28 ಉಚಿತ ವಿದ್ಯಾರ್ಥಿ ನಿಲಯ ಮತ್ತು ಸಂಸ್ಕೃತ ಕಾಲೇಜಿನ ಸುವರ್ಣ ಮಹೋತ್ಸವ.

1974: ಅಖಿಲ ಭಾರತ ವೀರಶೈವ ಮಠಾಧಿಪತಿಗಳ ಸಂಘದ ಅಧ್ಯಕ್ಷತೆ.

1977: ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರಗಳ ಗಂಗಾಧರರಾಜ ಯೋಗೀಂದ್ರ ಸ್ವಾಮೀಜಿಗಳ ರಜತ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ.

1978: ಗ್ರಾಮಾಂತರ ಬಸವಜಯಂತಿ ಯೋಜನೆ ಆರಂಭ.

1982: ಎ.24ರಂದು ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಸ್.ಗುಂಡೂರಾವ್ ಅವರಿಂದ   ಸುವರ್ಣಮಹೋತ್ಸವ ನೆನಪಿಗಾಗಿ ಗೌರವ ಗ್ರಂಥ ‘ಸಿದ್ದಗಂಗಾಶ್ರೀ’ ಬಿಡುಗಡೆ.

1982: ಶ್ರೀಸಿದ್ದಗಂಗಾ ಮಹಿಳಾ ಕಾಲೇಜು ಸ್ಥಾಪನೆ.

1982: ಪೀಠಾರೋಹಣ ಸುವರ್ಣ ಮಹೋತ್ಸವ ಸಮಾರಂಭ

1984: ನೆಲಮಂಗಲದಲ್ಲಿ ಶ್ರೀ ಸಿದ್ದಗಂಗಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ.

1984: ತುಮಕೂರಿನಲ್ಲಿ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜು ಸ್ಥಾಪನೆ.

1987: ಏ.20 ಹುಬ್ಬಳ್ಳಿ 3 ಸಾವಿರ ಮಠದ ಜಗದ್ಗುರು ಗಂಗಾಧರರಾಜ ಯೋಗೀಂದ್ರ ಸ್ವಾಮೀಜಿ ರಜತ ಮಹೋತ್ಸವದ ಅಧ್ಯಕ್ಷತೆ.

1992: ಫೆ.16 ಶ್ರೀಗಳ ವಜ್ರ ಮಹೋತ್ಸವ ಸಮಾರಂಭದಲ್ಲಿ ಉಪರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮ ಅವರಿಂದ ಸಿದ್ದಗಂಗಾ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಶಂಕುಸ್ಥಾಪನೆ.

1995: ಫೆ.2 ಸಿದ್ದಗಂಗಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆ.

1995: ತಮಿಳುನಾಡು ಧರ್ಮಪುರಿ ಜಿಲ್ಲೆ ಡೆಂಕಟಣ ಕೋಟೆ ತಾಲೂಕು ಮೊಳ್ಳಳ್ಳಿ ಗ್ರಾಮದಲ್ಲಿ ವಿಶ್ವ ಬಸವ ಜಯಂತಿ ಕಾರ್ಯಕ್ರಮದ ನೇತೃತ್ವ.

1996: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ 1995ನೇ ವರ್ಷದ ಘಟಿಕೋತ್ಸವದಲ್ಲಿ ಅನುಗ್ರಹ ಭಾಷಣ.

1997: ಮಾ.22 ಶ್ರೀಗಳ ವಜ್ರಮಹೋತ್ಸವ ಬೃಹತ್ ವಿದ್ಯಾರ್ಥಿ ನಿಲಯ, ಪ್ರಸಾದ ನಿಲಯ ಹಾಗೂ ದಾಸೋಹ ಸಿರಿ ಗ್ರಂಥ ಸಮರ್ಪಣೆ.

1997: ತಮಿಳುನಾಡಿನ ಸೇಲಂ ನಲ್ಲಿ ನಡೆದ ವೀರಶೈವ ಸಮಾಜದ ಸಮ್ಮೇಳನದ ಅಧ್ಯಕ್ಷತೆ.

2000: ಜ.30ರಂದು ಪ್ರಧಾನಿ ವಾಜಪೇಯಿ ಅವರಿಂದ ಸಂಸ್ಕೃತ ಕಾಲೇಜು, ಅಮೃತ ಮಹೋತ್ಸವ ಉದ್ಘಾಟನೆ. ಅಂಧ ಮಕ್ಕಳಿಗೆ ನೂತನ ಶಾಲಾ ಕಟ್ಟಡ ಹಾಗೂ ವಸತಿ ನಿಲಯ ನಿರ್ಮಾಣ.

2005: ಶ್ರೀಗಳ 98ನೇ ಜನ್ಮದಿನೋತ್ಸವ ಸಮಾರಂಭದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಆಡ್ವಾಣಿ ಭಾಗಿ.

 2005: ಪೀಠಾರೋಹಣ(ಅಮೃತ ಮಹೋತ್ಸವ) ಸಮಾರಂಭ ಗೃಹಸಚಿವ ಶಿವರಾಜ್ ಪಾಟೀಲ್, ಸಿಎಂ ಧರಂಸಿಂಗ್ ಭಾಗಿ.

2006: ಎ.7 ಶ್ರೀಗಳ ಗುರುವಂದನಾ ಕಾರ್ಯಕ್ರಮ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ರಾಜ್ಯಪಾಲ ಚತುರ್ವೇದಿ, ಸಿಎಂ ಕುಮಾರಸ್ವಾಮಿ, ಡಿಸಿಎಂ ಯಡಿಯೂರಪ್ಪ, ಸುತ್ತೂರು ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧ್ಯಕ್ಷರು ಭಾಗವಹಿಸಿದ್ದರು.

2009: ಕೃಷಿ ಸಮಾವೇಶ ಹಾಗೂ ಮಹಿಳಾ ಸಮಾವೇಶ

2009: ಶ್ರೀಗಳ ಶತಮಾನೋತ್ಸವ ಗುರುವಂದನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಪ್ರತಿಭಾ ಸಿಂಗ್ ಪಾಟೀಲ್ ಆಗಮಿಸಿದ್ದರು.

2010: ಶ್ರೀಗಳಿಗೆ ಬಸವಶ್ರೀ ಪುರಸ್ಕಾರದ ಗೌರವ.

2011: ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಶ್ರೀಮಠದ ಅಧ್ಯಕ್ಷ ಪದವಿಯ ವರ್ಗಾವಣೆ

2012: ಗುರುವಂದನಾ ಕಾರ್ಯಕ್ರಮ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಭಾಗಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News