ಮೂಡುಬಿದಿರೆ: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳು ಸೆರೆ

Update: 2019-01-22 14:53 GMT

ಮೂಡುಬಿದಿರೆ, ಜ. 22: ಸುಮಾರು ಎರಡು ತಿಂಗಳ ಹಿಂದೆ ಕಳವಾಗಿದ್ದ ಎರಡು ಬೈಕ್‍ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದು,  ಕಳವು ಮಾಡಿದ ಆರೋಪದಡಿಯಲ್ಲಿ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಗಾಂಧೀನಗರ ನಿವಾಸಿ ಮಂಜುನಾಥ (24) ಮತ್ತು ದಡ್ಡಿಕ್ರಾಸ್ ನಿವಾಸಿ ಇಮ್ರಾನ್ ಯಾನೆ ಪುಟ್ಟ ಎಂದು ಗುರುತಿಸಲಾಗಿದೆ. ಆರೋಪಿಗಳು ವಿದ್ಯಾಗಿರಿ ಮತ್ತು ಕೊಡ್ಯಡ್ಕ ಪರಿಸರದಲ್ಲಿ ಈ ಬೈಕ್‍ಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ದೇಜಪ್ಪರವರು ಸಿಬ್ಬಂದಿಗಳ ಜೊತೆ ನಿನ್ನೆ ಮಂಜಾನೆ ಗಾಂಧಿನಗರ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ದಲ್ಲಿ ಆರೋಪಿಗಳು ನಂಬರ್ ಪ್ಲೇಟ್ ಇಲ್ಲದ ಬೈಕ್‍ನಲ್ಲಿ ಬರುತ್ತಿರುವುದನ್ನು ಗಮನಿಸಿ ತಡೆದು ವಿಚಾರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸ್ ಆಯುಕ್ತರು ಮತ್ತು ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News