ಜ.26ರಂದು ಉಡುಪಿ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡಾಕೂಟ

Update: 2019-01-22 15:41 GMT

ಉಡುಪಿ, ಜ.22: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಪ್ರಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಮಟ್ಟದ ಸಹಕಾರಿ ಕ್ಷೇತ್ರದ ಸಿಬ್ಬಂದಿಗಳಿಗೆ ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ ‘ಕ್ರೀಡಾ ಸಮ್ಮಿಲನ’ವು ಜ.26ರಂದು ಬೆಳಗ್ಗೆ 9ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣ ದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿರುವರು.

ಬೆಳಿಗ್ಗೆ 8:30ಕ್ಕೆ ಸಹಕಾರಿಗಳ ಆಕರ್ಷಕ ಪಥ ಸಂಚಲನ ಜರಗಲಿದೆ. ಜಿಲ್ಲೆಯ ಸುಮಾರು 100 ವಿವಿಧ ಸಹಕಾರ ಸಂಘಗಳ 1500ಕ್ಕಿಂತಲೂ ಅಧಿಕ ಸಹಕಾರಿ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿರುವರು. ವೈಯಕ್ತಿಕ, ಗುಂಪು ಕ್ರೀಡೆ, ಪಥ ಸಂಚಲನ ಹಾಗೂ ಶಿಸ್ತುಬದ್ಧ ತಂಡ ಮುಂತಾದ ಸ್ಪರ್ಧೆಗಳಿಗೆ 3 ಲಕ್ಷ ರೂ.ಗಿಂತಲೂ ಅಧಿಕ ಮೊತ್ತದ ನಗದು ಬಹುಮಾನ ನೀಡಲಾಗುವುದು ಎಂದು ಬಡಗಬೆಟ್ಟು ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಶೆಟ್ಟಿ ಹಾಗೂ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News