ಕಾರು ಢಿಕ್ಕಿ: ಅಪರಿಚಿತ ವಲಸೆ ಕಾರ್ಮಿಕ ಮೃತ್ಯು

Update: 2019-01-22 15:43 GMT

ಉಡುಪಿ, ಜ.22: ಸಂತೆಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ 12:30ರ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು 35-40ವರ್ಷ ಪ್ರಾಯದ ಕೊಪ್ಪಳದ ವಲಸೆ ಕಾರ್ಮಿಕ ಎಂದು ತಿಳಿದು ಬಂದಿದೆ. ಆದರೆ ಮೃತರ ಹೆಸರು ಈವರೆಗೆ ತಿಳಿದುಬಂದಿಲ್ಲ ಎಂದು ಉಡುಪಿ ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸಂತೆಕಟ್ಟೆಯಿಂದ ಬ್ರಹ್ಮಾವರ ಕಡೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ಈ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಧ್ಯಾಹ್ನ 3ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿ ಯಾಗದೆ ಅವರು ಮೃತಪಟ್ಟರು.

ಈ ಬಗ್ಗೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News