ಹುಬ್ಬಳ್ಳಿ: ಮನೆ ಮಾಲಕನ ಕೊಲೆಗೈದು ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದರೋಡೆ

Update: 2019-01-22 16:12 GMT

ಹುಬ್ಬಳ್ಳಿ,ಜ.22: ಮನೆಯ ಕಿಟಕಿ ಮೂಲಕ ಒಳನುಗ್ಗಿದ ದರೋಡೆಕೋರರು ಮನೆಯ ಮಾಲಕನನ್ನು ಕೊಲೆ ಮಾಡಿ, ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾದ ಘಟನೆ ನಗರದ ರಾಜನಗರದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ.

ಮನೆಯ ಕಿಟಕಿ ಮೂಲಕ ಒಳನುಗ್ಗಿದ ದರೋಡೆಕೋರರು ಮನೆಯಲ್ಲಿದ್ದ ದಂಪತಿಗಳನ್ನು ಉಸಿರು ಗಟ್ಟಿಸಿ ಕೊಲ್ಲಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಉಸಿರುಗಟ್ಟಿ ಮನೆಯ ಮಾಲಕ ವೆಂಕಣ್ಣ ಬಣವಿ(72) ಸಾವನ್ನಪ್ಪಿದ್ದಾರೆ. ದರೋಡೆಕೋರರಿಂದ ತಪ್ಪಿಸಿಕೊಂಡ ವೆಂಕಣ್ಣ ಬಣವಿ ಅವರ ಪತ್ನಿ ಮಾಲಾ ಪೊಲೀಸರಿಗೆ ಮಾಹಿತಿ ನೀಡಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News