ಶಿವಮೊಗ್ಗ: ಬೈಕ್ ಗೆ ಕೆಎಸ್‍ಆರ್‍ಟಿಸಿ ಬಸ್ ಢಿಕ್ಕಿ; ಮಹಿಳೆ ಮೃತ್ಯು

Update: 2019-01-22 16:16 GMT

ಶಿವಮೊಗ್ಗ, ಜ. 22: ಹಿಂಬದಿಯಿಂದ ಆಗಮಿಸಿದ ಕೆಎಸ್‍ಆರ್‍ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಟಿ.ಕೆ.ರಸ್ತೆಯ ಮಾರುತಿನಗರ ಆರ್ಚ್ ಬಳಿ ನಡೆದಿದೆ.

ರಾಧಾಮಣಿ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರ ಪತಿ ರಂಗಸ್ವಾಮಿಯವರ ಕೈ, ಕಾಲುಗಳಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಯು ಶಿವನಿಕ್ರಾಸ್‍ನಿಂದ ಬಾರಂದೂರು ಕಡೆಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ, ಕೆಎಸ್‍ಆರ್‍ಟಿಸಿ ಬಸ್ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ರಾಧಾಮಣಿಯವರು ರಸ್ತೆಯ ಮೇಲೆ ಬಿದ್ದಿದ್ದು, ಅವರ ತಲೆಯ ಮೇಲೆಯೇ ಬಸ್‍ನ ಚಕ್ರ ಹರಿದು ಹೋದ ಪರಿಣಾಮ ಅವರು ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ಈ ಸಂಬಂಧ ಬಸ್ ಚಾಲಕನ ವಿರುದ್ದ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News