ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-01-22 16:27 GMT

ಶಿವಮೊಗ್ಗ, ಜ. 22: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ಮುದ್ದಿನಕೊಪ್ಪ ಕ್ರಾಸ್ ಬಳಿಯ ಎನ್.ಹೆಚ್. 206 ರಲ್ಲಿ ನಡೆದಿದೆ.

ಚಿಕ್ಕದಾನವಂದಿ ಗ್ರಾಮದ ನಿವಾಸಿ ಜಗದೀಶ್ (25) ಮೃತಪಟ್ಟ ಬೈಕ್ ಚಾಲಕ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಪ್ರಕಾಶ್ (23) ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಜಗದೀಶ್ ಹಾಗೂ ಗಾಯಾಳು ಪ್ರಕಾಶ್ ಸ್ನೇಹಿತರಾಗಿದ್ದು, ಗಾರೆ ಕೆಲಸ ಮಾಡುತ್ತಿದ್ದರು. ಎಂದಿನಂತೆ ಶಿವಮೊಗ್ಗ ನಗರಕ್ಕೆ ಕೆಲಸಕ್ಕೆ ತೆರಳಿ ಬೈಕ್‍ನಲ್ಲಿ ಮನೆಗೆ ಹಿಂದಿರುಗುವಾಗ ಅಪರಿಚಿತ ವಾಹನವೊಂದರ ಚಾಲಕ ಇವರ ಬೈಕ್‍ಗೆ ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News