ಶಿವಕುಮಾರ ಸ್ವಾಮೀಜಿ ನಿಧನ: ಕೆ.ರೆಹಮಾನ್ ಖಾನ್ ಸಂತಾಪ

Update: 2019-01-22 17:08 GMT

ಬೆಂಗಳೂರು, ಜ.22: ಡಾ.ಶಿವಕುಮಾರ ಸ್ವಾಮೀಜಿಯವರ ಆಗಲಿಕೆ ಸಮಸ್ತ ಕನ್ನಡದ ಜನತೆಗೆ ತುಂಬಲಾರದ ನಷ್ಟವಾಗಿದ್ದು, ಅವರ ಅನುಯಾಯಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಕೆ.ರೆಹಮಾನ್ ಖಾನ್ ಸಂತಾಪ ಸೂಚಿಸಿದ್ದಾರೆ.

ಡಾ.ಶಿವಕುಮಾರ ಸ್ವಾಮೀಜಿಯವರು ಮೃದು ಸ್ವಭಾವಿ ಹಾಗೂ ಕರುಣಾಮಯಿಯಾಗಿದ್ದು, ಸಾವಿರಾರು ಮಕ್ಕಳಿಗೆ ಊಟ- ವಸತಿ, ವಿದ್ಯಾಭ್ಯಾಸ ಒದಗಿಸುವ ಮೂಲಕ ಆಧ್ಯಾತ್ಮಿಕ ಗುರುವಾಗಿದ್ದರು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News