ಮನೆಗೆ ನುಗ್ಗಿ ಕದಿಯುತ್ತಿದ್ದ ಇಬ್ಬರ ಬಂಧನ: ಚಿನ್ನಾಭರಣ ವಶ

Update: 2019-01-22 17:38 GMT

ಮೈಸೂರು,ಜ.22: ಮನೆಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ವಾಲ್ಮೀಕಿ ನಗರದ ಇಮ್ರಾನ್ ಖಾನ್ (32) ಬೆಂಗಳೂರಿನ ಖದೀರ್ ಅಹಮದ್ (24) ಎಂದು ಗುರುತಿಸಲಾಗಿದೆ.

ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಓಡುತ್ತಿದ್ದ ಇವರನ್ನು ಮಾಹಿತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳು ಮಂಡಿ ಹಾಗೂ ಲಷ್ಕರ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಆರೋಪಿಗಳಿಂದ 2,32,400 ರೂ. ಮೌಲ್ಯದ 85 ಗ್ರಾಂ ಚಿನ್ನಾಭರಣ, 560 ಗ್ರಾಂ ಬೆಳ್ಳಿ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪತ್ತೆ ಕಾರ್ಯದಿಂದ ಮಂಡಿ ಠಾಣೆಯ 1, ಲಷ್ಕರ್ ಠಾಣೆಯ 1 ಮನೆ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಡಾ.ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಗೋಪಾಲ್  ನೇತೃತ್ವದಲ್ಲಿ ಮಂಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅರುಣ್.ಎಲ್, ಎಎಸ್ಐ ಗುರುಸ್ವಾಮಿ, ಸಿಬ್ಬಂದಿಗಳಾದ ಎಸ್.ಜಯಕುಮಾರ್, ಜಯಪಾಲ, ಇಲಿಯಾಸ್, ರವಿಗೌಡ ಶಂಕರ್ ಟಿ ಬಂಡಿವಡ್ಡರ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News