ಆಟೋ ರಿಕ್ಷಾಕ್ಕೆ ಸರಕಾರಿ ಬಸ್ ಢಿಕ್ಕಿ: ಇಬ್ಬರಿಗೆ ಗಾಯ

Update: 2019-01-23 07:55 GMT

ಮಂಗಳೂರು, ಜ.23: ನಗರದ ನಾಗುರಿ ಕಪಿತಾನಿಯೋ ಬಳಿ ಆಟೋ ರಿಕ್ಷಾವೊಂದಕ್ಕೆ ಸರಕಾರಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ.

ಇದರಿಂದ ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ.

ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ರಿಕ್ಷಾದಲ್ಲಿ ಮಹಿಳೆಯೊಬ್ಬರು ಪ್ರಯಾಣಿಸುತ್ತಿದ್ದರು. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಧಾವಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News