‘ನಾ ಕಲಿತ ಶಾಲೆಯ ಋಣವ ತೀರಿಸುವೆ ಇದು ನನ್ನ ಜವಾಬ್ದಾರಿ’ ಆಂದೋಲನ
Update: 2019-01-23 16:50 GMT
ಉಡುಪಿ, ಜ.23: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸರಕಾರಿ ಶಾಲೆಗಳ ಉನ್ನತೀಕರಣ ಕಾರ್ಯಕ್ರಮ ‘ನಾ ಕಲಿತ ಶಾಲೆಯ ಋಣವ ತೀರಿಸುವೆ- ಇದು ನನ್ನ ಜವಾಬ್ದಾರಿ’ ಆಂದೋಲನ ಜ. 25ರಂದು ಬೆಳಗ್ಗೆ 11ಕ್ಕೆ ವಳಕಾಡು ಸರಕಾರಿ ಸಂಯುಕ್ತ ಮಾದರಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.