ಮುಂಡಗೋಡ: ರಸ್ತೆ ಅಪಘಾತದ ಗಾಯಾಳು ಮೃತ್ಯು

Update: 2019-01-23 17:39 GMT

ಮುಂಡಗೋಡ, ಜ.23: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ತಾಲೂಕಿನ ತಟ್ಟಿಹಳ್ಳಿ ಗ್ರಾಮದ ನಾಗರಾಜ ಜ್ಯೋತೆಪ್ಪನವರ ಎಂದು ತಿಳಿದು ಬಂದಿದೆ. ಸೋಮವಾರ ತಡರಾತ್ರಿ ಹುಬ್ಬಳ್ಳಿ-ಶಿರಸಿ ರಸ್ತೆಯ ಬಾಚಣಕಿ ಗ್ರಾಮದ ಹತ್ತಿರ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿತ್ತು. ಬೈಕ್ ಸವಾರ ನಾಗರಾಜ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News