ವಿಜಯಪುರ: ಡಾ.ಶಿವ ವಿಶ್ವನಾಥನ್ ವಿರುದ್ಧ ಪ್ರತಿಭಟನೆ
Update: 2019-01-24 07:21 GMT
ವಿಜಯಪುರ, ಜ.24: ಧಾರವಾಡದಲ್ಲಿ ಇತ್ತೀಚೆಗೆ ನಡೆದ ‘ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದಲ್ಲಿ ಚಿಂತಕ ಡಾ.ಶಿವ ವಿಶ್ವನಾಥನ್ ಸೈನಿಕರ ಬಗ್ಗೆ ಅವಹೇಳಿಕೆ ನೀಡಿದ್ದರೆನ್ನಲಾದ ಹೇಳಿಕೆಯನ್ನು ಖಂಡಿಸಿ ವಿಜಯಪುರದಲ್ಲಿ ಇಂದು ಪ್ರತಿಭಟನೆ ನಡೆಯಿತು.
ವಿಜಯಪುರ ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಸಂಘ ಹಾಗೂ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದ ಬಳಿ ನಡೆದ ಪ್ರತಿಭಟನೆಯಲ್ಲಿ ಡಾ.ಶಿವ ವಿಶ್ವನಾಥ್ ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಲಾಯಿತು. ಪ್ರತಿಭಟನಾಕಾರರು ವಿಶ್ವನಾಥನ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಧಾರವಾಡ ಸಾಹಿತ್ಯ ಸಂಭ್ರಮದಲ್ಲಿ ಸೈನಿಕರು ರೇಪಿಸ್ಟ್ಗಳೆಂದು ಡಾ.ಶಿವ ವಿಶ್ವನಾಥನ್ ಹೇಳಿಕೆ ನೀಡಿದ್ದರೆಂದು ಆರೋಪಿಸಿ ಈ ಪ್ರತಿಭಟನೆ ನಡೆಸಲಾಗಿದೆ.