ಕಳವು ಪ್ರಕರಣ: ಆರೋಪಿ ಸೆರೆ

Update: 2019-01-24 16:32 GMT

ಬೆಂಗಳೂರು, ಜ.24: ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪ ಸಂಬಂಧ ರಮೇಶ್ ಯಾನೆ ಕೆಜಿಎಫ್ ರಮೇಶ್ ಅನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಜಿಎಫ್‌ನ ರಮೇಶ್ ಕಳೆದ 1996 ರಿಂದಲೂ ಮನೆಕಳವು ಮಾಡುತ್ತಿದ್ದು, ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಎರಡು ದಶಕಗಳ ಹಿಂದೆಯೇ ಕಳ್ಳತನ ಕೃತ್ಯ ನಡೆಸಿ, ಬೀಗ ಹಾಕಿದ ಮನೆಗಳಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ರಮೇಶ್‌ನನ್ನು ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದು, ನಾಲ್ಕು ವರ್ಷಗಳಿಂದ ಮತ್ತೆ ಕಳ್ಳತನ ಕೃತ್ಯಗಳಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ.

20 ವರ್ಷಗಳ ಹಿಂದೆ ಸಂಗ್ರಹಿಸಿದ್ದ ಮುಖಚರ್ಯೆ ಹಾಗೂ ಬೆರಳಚ್ಚು ಆಧರಿಸಿ ಆರೋಪಿಯನ್ನು ಬಂಧಿಸಿ, 13 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಳ್ಳಲಾಗಿದೆ. 20 ವರ್ಷಗಳ ಹಿಂದಿನ ಮುಖಚರ್ಯೆ ಸ್ವಲ್ಪ ಬದಲಾಗಿದ್ದರೂ, ಆರೋಪಿಯನ್ನು ಶ್ರಮವಹಿಸಿ ಬಂಧಿಸಲಾಗಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News