ಹರ್ಯಾಣ ಮಾಜಿ ಸಿಎಂ ಹೂಡಾ ಮನೆಯಲ್ಲಿ ಸಿಬಿಐ ತಪಾಸಣೆ
Update: 2019-01-25 18:21 GMT
ಹೊಸದಿಲ್ಲಿ, ಜ.25: ಗುರುಗ್ರಾಮದಲ್ಲಿ ಜಮೀನು ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಹರ್ಯಾಣದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಅವರ ನಿವಾಸದಲ್ಲಿ ಶುಕ್ರವಾರ ಸಿಬಿಐ ಅಧಿಕಾರಿಗಳು ತಪಾಸಣೆ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆದಿರುವ ದೂರಿನಂತೆ ಹೂಡಾ ಹಾಗೂ ಇತರರ ವಿರುದ್ಧ ಸಿಬಿಐ ಹೊಸ ಪ್ರಕರಣವನ್ನು ದಾಖಲಿಸಿದ್ದು ದಿಲ್ಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ 30 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ತಮ್ಮ ವಿರುದ್ಧದ ರಾಜಕೀಯ ಸೇಡಿನ ಫಲವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಹೀಗೆ ಮಾಡಿ ತಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಹೂಡಾ ಪ್ರತಿಕ್ರಿಯಿಸಿದ್ದಾರೆ.