×
Ad

70ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ

Update: 2019-01-26 22:20 IST

ಹಾಸನ, ಜ. 26: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಬೆಳಿಗ್ಗೆ ನಡೆದ 70ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ನೆರವೇರಿಸಿದರು. 

ನಂತರ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನವು ನಮಗೆ ಮೂಲ ಭೂತ ಹಕ್ಕುಗಳನಷ್ಷೇ ಅಲ್ಲದೇ, ಕರ್ತವ್ಯಗಳನ್ನೂ ಸಹ ನಿಗಧಿಪಡಿಸಿದೆ. ನಾವು ನಮ್ಮ ಹಕ್ಕುಗಳಿಗಷ್ಟೇ ಗಮನ ಹರಿಸದೇ, ದೇಶಕ್ಕಾಗಿ ನಾವು ಮಾಡಬೇಕಾದ ಕರ್ತವ್ಯಗಳನ್ನೂ ಸಹ ನಿಷ್ಟೆಯಿಂದ ಮಾಡಲು ಕಟಿಬದ್ಧವಾಗಿರಬೇಕು ಬ್ರಿಟೀಷರ ದಾಸ್ಯದಿಂದ ಬಳಲಿದ್ದ ನಮ್ಮ ದೇಶವು ಮಹಾತ್ಮಾ ಗಾಂಧೀಜಿಯವರು, ಜವಹರ್ ಲಾಲ್ ನೆಹರು ರವರು, ಸರ್ದಾರ್ ವಲ್ಲಭಬಾಯಿ ಪಟೇಲರಂಥ ನೂರಾರು ಸ್ವಾತಂತ್ರ್ಯ ಸೇನಾನಿಗಳ ನಿರಂತರ ಹೋರಾಟದ ಫಲವಾಗಿ ಸ್ವಾತಂತ್ರ್ಯದ ಹೊಸ ಶಖೆಗೆ ಕಾಲಿಟ್ಟಿರುತ್ತೇದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‍ರವರ ದೂರದೃಷ್ಟಿ, ಪರಿಶ್ರಮದಿಂದ ರಚಿತವಾದ ಸಮಗ್ರ ಸಂವಿಧಾನವು 1950ನೇ ಜ.26ರಿಂದ ಅಧಿಕೃತವಾಗಿ ಜಾರಿಗೆ ಬಂದಿರುತ್ತದೆ. ಈ ದಿನವನ್ನು ಪ್ರತಿ ವರ್ಷದಂತೆ ಇಂದು ಗಣರಾಜ್ಯೋತ್ಸವ ದಿನವಾಗಿ ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ, ಅಗಲಿದ ಶ್ರೀಗಳಿಗೆ ನಾನು ಗೌರವ ಪೂರ್ವಕವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸ ಬಯಸುತ್ತೇನೆ ಎಂದರು. ಇತ್ತೀಚಿನ ವರ್ಷಗಳಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿದೆ. 

ಇಡೀ ವಿಶ್ವವೇ ಭಾರತವು ಆರ್ಥಿಕ, ಔದ್ಯೋಗಿಕ, ಸಾಮಾಜಿಕ, ವೈಜ್ಞಾನಿಕ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಬೆರಗುಗಣ್ಣಿನಿಂದ ನೋಡುತ್ತಿವೆ. ನಮ್ಮ ಭಾರತ ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಯನ್ನು ಅಮೇರಿಕಾ, ರಷ್ಯಾ, ಬ್ರಿಟನ್‍ನಂಥಾ ರಾಷ್ಟ್ರಗಳು ಪ್ರಶಂಸಾ ದೃಷ್ಟಿಯಿಂದ ನೋಡುತ್ತಿದ್ದು, ಇದು ನಾವು ಹೆಮ್ಮೆಪಡುವ ವಿಷಯವಾಗಿದೆ ಎಂದು ಅವರು ಹೇಳಿದರು. ಉತ್ತಮ ಶಿಕ್ಷಣವು ರಾಷ್ಟ್ರದ ಪ್ರಗತಿಯ ಅಡಿಗಲ್ಲಾಗಿದೆ. ಈ ದೃಷ್ಟಿಯಿಂದ, ಜಿಲ್ಲೆಯಲ್ಲಿ, ಅಗತ್ಯವಿರುವೆಡೆಗಳಲ್ಲಿ ಹೊಸದಾಗಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲು, ಹಾಲಿ ಇರುವ ಶಾಲಾ-ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಲಾಗಿದೆ. ಗ್ರಾಮಾಂತರ ಪ್ರದೇಶದ, ಅದರಲ್ಲೂ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯು ಇನ್ನಿತರೇ ಕ್ಷೇತ್ರಗಳಲ್ಲಿಯಂತೆ, ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಇನ್ನೂ ಹೆಚ್ಚಿನ

ಆಕರ್ಷಕ ಪಥಸಂಚಲನ -ಶಾಲಾಮಕ್ಕಳಿಂದ ಅದ್ದೂರಿಯಾಗಿ ಜರುಗಿದ ಸಾಂಸ್ಕøತಿಕ ಕಾರ್ಯಕ್ರಮ ಪ್ರಗತಿ ಸಾಧಿಸಲು ಕ್ರಮವಹಿಸಲಾಗಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲ ನಡೆಸಲಾಯಿತು. ಉತ್ತಮ ತಂಡಕ್ಕೂ ಕೂಡ ನೆನಪಿನ ಕಾಣಿಕ ನೀಡಿ ಗೌರವಿಸಿದರು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಗೊಂಡ ಮಕ್ಕಳ ವಿವಿಧ ರೀತಿಯ ಸಾಂಸ್ಕ್ರತಿಕ ಕಾರ್ಯಕ್ರಮ ನೋಡುಗರ ಗಮನಸೆಳೆಯಿತು.

ವೇದಿಕೆಯಲ್ಲಿ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ, ಎಂಎಲ್‍ಸಿ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಸ್ಪಿ ಪ್ರಕಾಶ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಸಿ. ಪುಟ್ಟಸ್ವಾಮಿ, ಉಪವಿಭಾಗದೀಕಾರಿ ಹೆಚ್.ಎಲ್. ನಾಗರಾಜು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ ದೇವರಾಜು, ತಾಪಂ ಅಧ್ಯಕ್ಷ ಬಿ.ಟಿ. ಸತೀಶ್, ನಗರಸಭೆ ಆಯುಕ್ತ ಪರಮೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್, ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News