ಪ್ರಿಯಾಂಕ ಗಾಂಧಿ ನೇಮಕ ಯುವ ಜನತೆಯಲ್ಲಿ ಉತ್ಸಾಹ ತುಂಬಿದೆ: ಮಲ್ಲಿಕಾರ್ಜುನ ಖರ್ಗೆ
Update: 2019-01-27 13:03 GMT
ಯಾದಗಿರಿ, ಜ.27: ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕ ಗಾಂಧಿ ನೇಮಕವಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಯುವಜನತೆಯಲ್ಲಿ ಉತ್ಸಾಹ ಹಿಮ್ಮಡಿಗೊಳಿಸಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಯಾಗಿರುವುದು ದೇಶದ ಎಲ್ಲ ಭಾಗಗಳಲ್ಲೂ ಸಂತಸ ತಂದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.