ಕಡಬ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Update: 2019-01-28 06:02 GMT

ಕಡಬ, ಜ. 28. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಬೆತ್ತೋಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆತ್ತೋಡಿ ಸಮೀಪದ ಸುಳ್ಯ ನಿವಾಸಿ ದಿ. ಕುಶಾಲಪ್ಪ ಗೌಡ ಎಂಬವರ ಪುತ್ರ ಅಶ್ವಥ್ (27) ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಲಾರಿ ಚಾಲಕನಾಗಿದ್ದ ಈತ ಶನಿವಾರ  ತನ್ನ ಮನೆಗೆ ಬಂದಿದ್ದು, ಸೋಮವಾರ ಮುಂಜಾನೆ ತನ್ನ ಕೊಠಡಿಯಲ್ಲಿ ನೇಣುಬಿಗಿದು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News