ಬೆಂಗಳೂರು: ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ; ಆರೋಪ

Update: 2019-01-28 14:11 GMT

ಬೆಂಗಳೂರು, ಜ.28: ಶಾಲಾ ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಉತ್ತರಹಳ್ಳಿಯಲ್ಲಿ ಇಂದು ನಡೆದಿದೆ ಎಂದು ತಿಳಿದುಬಂದಿದೆ.

ಹತ್ತನೇ ತರಗತಿ ವಿದ್ಯಾರ್ಥಿ ಧನುಷ್ ಆತ್ಮಹತ್ಯೆಗೆ ಶರಣಾದ ಬಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.

ಉತ್ತರಹಳ್ಳಿ ಬಳಿಯ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ ಧನುಷ್‌ಗೆ ಶಾಲಾ ಶಿಕ್ಷಕ ಬಾಲಕೃಷ್ಣ ಎಂಬಾತ ನಿಂದಿಸಿ, ಹಲ್ಲೆ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದ ಬಾಲಕ ಶಿಕ್ಷಕ ಬಾಲಕೃಷ್ಣ ವಿರುದ್ಧ ಕಿರುಕುಳದ ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣ ಸಂಬಂಧ ಶಿಕ್ಷಕ ಬಾಲಕೃಷ್ಣ ನನ್ನು ಬಂಧಿಸುವಂತೆ ವಿದ್ಯಾರ್ಥಿ ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಇಲ್ಲಿನ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ಬಾಲಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News