ದ.ಕ. ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Update: 2019-01-29 06:13 GMT

ಮಂಗಳೂರು, ಜ.29: ದ.ಕ. ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಯು.ಟಿ. ಖಾದರ್ ಚಾಲನೆ ನೀಡಿದರು.

ದ.ಕ. ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ‘ವ್ಯಸನ ಮುಕ್ತ ಬದುಕು-ಸ್ವಸ್ಥ ಸಮಾಜ’ಎಂಬ ಆಶಯದೊಂದಿಗೆ ಜ.29, 30, 31ರಂದು ಮೂರು ದಿನಗಳ ಕಾಲ ಮಂಗಳೂರು ಪುರಭವನದಲ್ಲಿ ನಡೆಯಲಿದೆ.

ಸಮ್ಮೇಳನದ ಸಭಾಂಗಣದ ಮುಂಭಾಗ ಧ್ವಜಾರೋಹಣವನ್ನು ನಗರಾಭಿವೃದ್ಧಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಪರಿಷತ್‌ನ ಧ್ವಜಾರೋಹಣವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಸಮ್ಮೇಳನದ ಧ್ವಜಾರೋಹಣವನ್ನು ಮನಾಪ ಮೇಯರ್ ಭಾಸ್ಕರ್ ಕೆ. ನೆರವೇರಿಸಿದರು.

ಈ ಸಂದರ್ಭ ಮೇಯರ್ ಭಾಸ್ಕರ ಕೆ., ಶಶಿಧರ್ ಹೆಗ್ಡೆ, ನಝೀರ್, ಶಹುಲ್ ಹಮೀದ್, ಮುಹಮ್ಮದ್ ಮುಕ್ಕಚೇರಿ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News