ಪರೀಕ್ಷೆಯ ಭಯ: ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Update: 2019-01-29 12:24 GMT

ಶಿವಮೊಗ್ಗ, ಜ. 29: ಪರೀಕ್ಷಾ ಭಯದಿಂದ ಮಾನಸಿಕ ಖಿನ್ನತೆಗೊಳಗಾದ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ರವಿವಾರ ರಾತ್ರಿ ನಡೆದಿದೆ. 

ನೆಹರೂ ನಗರದ ನಿವಾಸಿ ನೂತನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತನ ತಂದೆ ಈಶ್ವರಪ್ಪರವರು ಟೈಲರ್ ವೃತ್ತಿಯ ಮೂಲಕ ಜೀವನ ಸಾಗಿಸುತ್ತಿದ್ದರು. ನೂತನ್ ಆನವಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜ್‍ನಲ್ಲಿರುವ ಪ್ರೌಢಶಾಲೆಯಲ್ಲಿ ನೂತನ 10 ನೇ ತರಗತಿ ಅಭ್ಯಾಸ ಮಾಡುತ್ತಿದ್ದ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News