ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಕರ್ನಾಟಕದ ಕ್ಷೇತ್ರದಲ್ಲಿ ಪ್ರಿಯಾಂಕಾ ಸ್ಪರ್ಧೆ: ಕಾಂಗ್ರೆಸಿಗರ ಒತ್ತಾಯ

Update: 2019-01-30 10:58 GMT

ಬೆಂಗಳೂರು, ಜ.30: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯವರು ಸ್ಪರ್ಧಿಸುವಂತೆ ಚಿಕ್ಕಮಗಳೂರು ಮತ್ತು ಉಡುಪಿ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

41 ವರ್ಷಗಳ ಹಿಂದೆ ಚಿಕ್ಕಮಗಳೂರು ಉಪ ಚುನಾವಣೆಯಲ್ಲಿ ಪ್ರಿಯಾಂಕಾರ ಅಜ್ಜಿ ಇಂದಿರಾ ಗಾಂಧಿ ಜಯ ಗಳಿಸಿದ್ದರು. ಆ ಸಂದರ್ಭ ಇಂದಿರಾ ವಿರುದ್ಧ ಪ್ರಚಾರ ನಡೆಸಿದ್ದವರಲ್ಲಿ ಜಾರ್ಜ್ ಫರ್ನಾಂಡೀಸ್ ಪ್ರಮುಖರಾಗಿದ್ದರು.

ಸದ್ಯ ಈ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆಯವರು ಸಂಸದೆಯಾಗಿದ್ದಾರೆ. 1977ರಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಮತ್ತು ಇಂದಿರಾ ಗಾಂಧಿಯವರಿಗೆ ಚಿಕ್ಕಮಗಳೂರಿನ ಗೆಲುವು ರಾಜಕೀಯ ಪುನರ್ಜನ್ಮ ನೀಡಿತ್ತು. ಪ್ರಿಯಾಂಕಾ ಗಾಂಧಿಯವರ ವಿಚಾರದಲ್ಲೂ ಇದೇ ಪುನರಾವರ್ತನೆಯಾಗಲಿದೆ ಎಂದು ಕಾಂಗ್ರೆಸ್ಸಿಗರು ಅಭಿಪ್ರಾಯಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News