ಕುಮಾರಸ್ವಾಮಿಯವರೇ ರಾಜ್ಯದ ಮುಖ್ಯಮಂತ್ರಿ: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-01-30 15:46 GMT

ಹೊಸದಿಲ್ಲಿ, ಜ. 30: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಯಾವುದೆ ಗೊಂದಲವಿಲ್ಲ. ಜೆಡಿಎಸ್ ವರಿಷ್ಠ ದೇವೇಗೌಡ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಕುಮಾರಸ್ವಾಮಿಯವರೇ ರಾಜ್ಯದ ಮುಖ್ಯಮಂತ್ರಿ ಎಂದು ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮೈತ್ರಿ ಸರಕಾರದಲ್ಲಿನ ಸಮಸ್ಯೆಗಳ ಬಗ್ಗೆ ಸಮನ್ವಯ ಸಮಿತಿಯಲ್ಲಿ ಮಾತ್ರ ನನ್ನ ಅಭಿಪ್ರಾಯ ಹೇಳುತ್ತೇನೆ. ಆದರೆ, ಶಾಸಕರು ಮತ್ತು ಮುಖಂಡರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದರು.

ಮೈತ್ರಿ ಸರಕಾರದ ಆಕ್ಷನ್, ರಿಯಾಕ್ಷನ್ ಚೆನ್ನಾಗಿದೆ. ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ಸರಿಯಾಗಿಯೇ ಇದೆ. ಇನ್ನೇನಿದ್ರೂ ಮ್ಯಾಥ್ಸ್ ಮಾತ್ರ ಆಗಬೇಕು. ಅದರಲ್ಲೂ ನಾವೇ ಮೇಲಿದ್ದೇವೆ ಎಂದು ಲೋಕಸಭೆ ಸೀಟು ಹಂಚಿಕೆ ಸಂಬಂಧ ಸಿದ್ದರಾಮಯ್ಯ ತಮ್ಮದೆ ದಾಟಿಯಲ್ಲಿ ಪ್ರತಿಕ್ರಿಯಿಸಿದರು.

ನಮ್ಮ ಪಕ್ಷದ ಶಾಸಕರು ನನ್ನನ್ನು ಮುಖ್ಯಮಂತ್ರಿ ಎಂದು ಹೇಳಿಲ್ಲ. ನಾನು ಸಿಎಂ ಆಗಿದ್ದೆ ಮುಂದೆಯೂ ಅವರೇ ಸಿಎಂ ಆಗಬೇಕೆಂದು ಹೇಳಿದ್ದಾರೆ ಎಂದು ಸ್ಪಷ್ಟಣೆ ನೀಡಿದ ಅವರು, ನಮ್ಮ ಪಕ್ಷದ ಎಲ್ಲ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. ಈ ವೇಳೆ ಸಚಿವ ಝಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News