ಕೊಡಗು ನೂತನ ಜಿಲ್ಲಾಧಿಕಾರಿಯಾಗಿ ಅನೀಸ್ ಕಣ್ಮಣಿ ಜಾಯ್ ಅಧಿಕಾರ ಸ್ವೀಕಾರ

Update: 2019-02-01 11:50 GMT

ಮಡಿಕೇರಿ, ಫೆ. 1: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಪ್ರಭಾರ  ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರಿಂದ ನೂತನ ಜಿಲ್ಲಾಧಿಕಾರಿ ಅವರು ಅಧಿಕಾರ ಸ್ವೀಕರಿಸಿದರು.      
ನೂತನ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ಒಂದು ವರ್ಷ, ಒಂದು ತಿಂಗಳ ಕಾಲ ಜಿ.ಪಂ.ಸಿಇಒ, ನವದೆಹಲಿಯ ಕರ್ನಾಟಕ ಭವನದಲ್ಲಿ ಉಪ ಆಯುಕ್ತರಾಗಿ, ಹಾಗೆಯೇ ಬೀದರ್ ಜಿಲ್ಲೆಯಲ್ಲಿ ಒಂದು ವರ್ಷಗಳ ಕಾಲ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News