ಡಾ.ವಿ.ಚಂದ್ರಶೇಖರ್ ನಂಗಲಿಗೆ ಕುವೆಂಪು ಸಿರಿಗನ್ನಡ ಪ್ರಶಸ್ತಿ
Update: 2019-02-01 17:22 GMT
ಬೆಂಗಳೂರು, ಫೆ.1: ಕುವೆಂಪು ಸಿರಿಗನ್ನಡ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆ.5ರಂದು ಸಂಜೆ 5.30ಕ್ಕೆ ಚಾಮರಾಜಪೇಟೆಯ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗಿದೆ.
ಪ್ರಶಸ್ತಿಗೆ ಸಾಹಿತಿ ಡಾ.ವಿ.ಚಂದ್ರಶೇಖರ್ ನಂಗಲಿ ಭಾಜನರಾಗಿದ್ದು, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮನು ಬಳಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.