ಇನ್ನಂಜೆ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

Update: 2019-02-02 12:19 GMT

ಶಿರ್ವ, ಫೆ.1: ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಇನ್ನಂಜೆ ಎಸ್.ವಿ.ಎಚ್. ಪದವಿಪೂರ್ವ ಕಾಲೇಜಿನ ದಾಸಭವನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಶಿಬಿರವನ್ನು ಇನ್ನಂಜೆ ಗ್ರಾಪಂ ಅಧ್ಯಕ್ಷೆ ರೇಖಾ ಅನಿಲ್ ಕುಮಾರ್ ಉದ್ಘಾಟಿಸಿ ದರು. ಅಧ್ಯಕ್ಷತೆಯನ್ನು ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ವಹಿಸಿದ್ದರು. ಎಸ್‌ವಿಎಚ್ ಕಾಲೇಜಿನ ಪ್ರಾಂಶು ಪಾಲ ಪುಂಡರಿಕಾಕ್ಷ ಕೊಡಂಚ ಮುಖ್ಯ ಅತಿಥಿಯಾಗಿದ್ದರು.

ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್, ಶಿಬಿರದ ಮುಖ್ಯ ಸಂಯೋಜಕ ಕಿಶೋರ್ ಕುಮಾರ್ ಆರೂರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಬಿರಾರ್ಥಿ ಮೇಘಾ ಸಾಮಗ ವಂದಿಸಿದರು. ಅಂಜನಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News