ಹಂಪಿ ಕಂಬ ಉರುಳಿಸಿದವರ ವಿರುದ್ಧ ಕಠಿಣ ಕ್ರಮ: ಡಿ.ಕೆ.ಶಿವಕುಮಾರ್

Update: 2019-02-02 13:53 GMT

ಬೆಂಗಳೂರು, ಫೆ.2: ಹಂಪಿಯಲ್ಲಿ ಐತಿಹಾಸಿಕ ಕೆತ್ತನೆಯುಕ್ತ ಕಲ್ಲು ಕಂಬಗಳನ್ನು ಉರುಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಲವು ಕಿಡಿಗೇಡಿಗಳು ಕಂಬಗಳನ್ನು ಉರುಳಿಸಿ ವಿಕೃತಿ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ್ದೇನೆ. ಆ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ಐತಿಹಾಸಿಕ ಕುರುಹುಗಳನ್ನು ನಾಶ ಮಾಡುವುದನ್ನಾಗಲಿ, ವಿರೂಪಗೊಳಿಸುವುದನ್ನಾಗಲಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಿವಕುಮಾರ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News