ಆಪರೇಷನ್ ಕಮಲದ ಬಗ್ಗೆ ಎಚ್ಚರಿಕೆ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ

Update: 2019-02-02 14:01 GMT

ಬೆಳಗಾವಿ, ಫೆ. 2: ‘ಆಪರೇಷನ್ ಕಮಲ ನಿರಂತರವಾಗಿ ನಡೆಯುತ್ತಿರುತ್ತದೆ. ಆದರೆ, ನಾವು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಜತೆಗೆ ಅಗತ್ಯ ಮುನ್ನೆಚ್ಚರಿಕೆಯನ್ನೂ ತೆಗೆದುಕೊಳ್ಳಬೇಕು’ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಚಿಕ್ಕೋಡಿ ಕ್ಷೇತ್ರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಇನ್ನೂ ನಾಲ್ಕು ವರ್ಷ ನಾಲ್ಕು ತಿಂಗಳ ವರೆಗೆ ಆಪರೇಷನ್ ಕಮಲದ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ನಾವು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ ಎಂದು ಪ್ರತಿಕ್ರಿಯೆ ನೀಡಿದರು.

ಚುನಾವಣಾ ಬಜೆಟ್: ಮುಂದಿನ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಕೊಂಡು ಕೇಂದ್ರ ಬಜೆಟ್ ಮಂಡಿಸಿದ್ದು, ಇದು ಒಂದು ಚುನಾವಣಾ ಬಜೆಟ್ ಅಷ್ಟೇ. ದೂರದೃಷ್ಟಿ, ಅಭಿವೃದ್ಧಿಪರ, ಪರಿಣಾಮಕಾರಿ ಯೋಜನೆಗಳಿಲ್ಲ ಎಂದು ಅವರು ಟೀಕಿಸಿದರು.

ನನ್ನ ಅಭಿಮಾನಿಗಳು ಪ್ರೀತಿ-ವಿಶ್ವಾಸದಿಂದ ನಾನು ಮುಖ್ಯಮಂತ್ರಿ ಆಗಬೇಕೆಂದು ಅಭಿಯಾನ ನಡೆಸುತ್ತಿರುತ್ತಾರೆ. ಇದರಲ್ಲಿ ಹೊಸದೇನು ಇಲ್ಲ. ರಾಜ್ಯದ ಮೈತ್ರಿ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ. 5 ವರ್ಷ ಆಡಳಿತಾವಧಿ ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News