ಆಟೊ ಚಾಲಕನ ಕೊಲೆ ಪ್ರಕರಣ: ಮೂವರ ಸೆರೆ

Update: 2019-02-02 14:47 GMT

ಬೆಂಗಳೂರು, ಫೆ.2: ಕ್ಷುಲ್ಲಕ ಕಾರಣಕ್ಕೆ ಆಟೊ ಚಾಲಕನನ್ನು ಕೊಲೆಗೈದಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಇಲ್ಲಿನ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಮಂಜೇಶ್, ಶ್ರೀಧರ್ ಮತ್ತು ವೆಂಕಟೇಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಜ.24ರ ತಡರಾತ್ರಿ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್‌ಜಿಇಎಫ್ ಲೇಔಟ್‌ನಲ್ಲಿ ಆಟೊ ಚಾಲಕ ರಘು ಎಂಬುವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು, ಕೃತ್ಯವೆಸಗಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News