ಲಾರಿ ಢಿಕ್ಕಿ: ಮಗು ಮೃತ್ಯು
Update: 2019-02-02 16:56 GMT
ಶಂಕರನಾರಾಯಣ, ಫೆ.2: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಗುವೊಂದು ಮೃತಪಟ್ಟ ಘಟನೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಬೆಳ್ವೆ ಗ್ರಾಮದ ಗೋಳಿಯಂಗಡಿ ಬಳಿ ನಡೆದಿದೆ.
ತೀರ್ಥಹಳ್ಳಿ ಕೋಣಂದೂರಿನ ಪವಿತ್ರ ಎಂಬವರ ನಾಲ್ಕು ವರ್ಷದ ಮಗ ಅಂಶಿಕ ಮೃತಪಟ್ಟ ದುರ್ದೈವಿ. ಹಾಲಾಡಿ ಕಡೆಯಿಂದ ಗೋಳಿಯಂಗಡಿ ಕಡೆಗೆ ಹೋಗುತ್ತಿದ್ದ ಲಾರಿಯು ರಸ್ತೆಯ ಬದಿಯಲ್ಲಿ ತಾಯಿಯೊಂದಿಗೆ ನಿಂತಿದ್ದ ಅಂಶಿಕಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಮಗು ಸ್ಥಳದಲ್ಲಿಯೇ ಮೃತಪಟ್ಟಿತ್ತು.
ವಿವಾಹ ಸಮಾರಂಭಕ್ಕೆಂದು ಬಂದಿದ್ದ ಇವರು, ಅಲ್ಲಿಂದ ಸಂಬಂಧಿಕರ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.