ಸರಕಾರವನ್ನು ಸಿದ್ದರಾಮಯ್ಯನವರೇ ಬೀಳಿಸಲಿದ್ದಾರೆ: ಆರ್.ಅಶೋಕ್

Update: 2019-02-03 13:10 GMT

ಹುಬ್ಬಳ್ಳಿ, ಫೆ. 3: ‘ಕಾಂಗ್ರೆಸ್ ಪಕ್ಷದವರು ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಆದರೆ, ಈಗಿರುವ ಸಿಎಂ ಗುಮಾಸ್ತರೇ? ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಸಿದ್ದರಾಮಯ್ಯನವರೇ ಬೀಳಿಸುತ್ತಾರೆ ಎಂಬ ಸಂಶಯವಿದ್ದು, ಏಳು ತಿಂಗಳಿಂದಲೂ ಮೈತ್ರಿ ಸರಕಾರ ಅಭದ್ರತೆಯಲ್ಲೇ ಇದೆ ಎಂದು ಟೀಕಿಸಿದರು.

ಸರಕಾರ ಕಳಪೆ ಆಡಳಿತ ನೀಡುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ. ಈ ಸರಕಾರದಲ್ಲಿ ವರ್ಗಾವಣೆ ದಂಧೆ ಬಿಟ್ಟರೆ ಬೇರೆನೂ ನಡೆಯುತ್ತಿಲ್ಲ ಎಂದಿದ್ದಾರೆ. ಇದನ್ನು ಗಮನಿಸಿದರೆ ಮೈತ್ರಿ ಸರಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೊತ್ತಾಗುತ್ತದೆ ಎಂದರು.

ಅಂಬರೀಶ್ ಅವರು ನಟರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದು, ಅವರ ಪತ್ನಿ ನಟಿ ಸುಮಲತಾ ನಮ್ಮ ಪಕ್ಷವನ್ನು ಸಂಪರ್ಕಿಸಿಲ್ಲ. ಅವರು ಬಿಜೆಪಿಗೆ ಬಂದರೆ ಸ್ವಾಗತ ಎಂದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News