ವಕೀಲೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಬಂಧನ

Update: 2019-02-03 15:57 GMT

ಬೆಂಗಳೂರು, ಫೆ.3: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪ ಪ್ರಕರಣ ಸಂಬಂಧ ಅಶೋಕ ನಗರ ಠಾಣೆ ಪೊಲೀಸರು ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ರಾಜೇಶ್ ಸಿಂಗ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಜ.25ರಂದು ತಡರಾತ್ರಿ ವಕೀಲೆಯೊಬ್ಬರು ಕಚೇರಿಯ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಆರೋಪಿ ಕಚೇರಿಯ ವಾಹನ ನಿಲ್ದಾಣ ಜಾಗದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಉತ್ತರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ. ಈ ಸಂಬಂಧ ವಕೀಲೆ ಅಶೋಕ ನಗರ ಠಾಣೆಯಲ್ಲಿ ದೂರು ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News