ಉಪ್ಪಿನಂಗಡಿ: ಪಿಕಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Update: 2019-02-03 16:30 GMT
ಉಪ್ಪಿನಂಗಡಿ, ಫೆ. 3: ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರಿನಲ್ಲಿ ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಆಲಂಕಾರು ಸಮೀಪದ ಶರವೂರು ನಿವಾಸಿ ದಿನೇಶ್ (30) ಎಂದು ಗುರುತಿಸಲಾಗಿದೆ.
ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಕಡಬ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಕುಂತೂರು ಸಮೀಪದ ಅನ್ನಡ್ಕ ಎಂಬಲ್ಲಿ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.