ಗಾಂಧಿ ಹತ್ಯೆಯನ್ನು ಸಂಭ್ರಮಿಸಿದ ಕೃತ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2019-02-04 06:58 GMT

ಮಂಗಳೂರು, ಫೆ.4: ಹುತಾತ್ಮ ದಿನದಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹತ್ಯೆ ಕೃತ್ಯವನ್ನು ಮರುಸೃಷ್ಟಿಸಿ ಸಂಭ್ರಮಿಸಿದ ಗೋಡ್ಸೆ ಅನುಯಾಯಿಗಳ ಹೇಯ ಕೃತ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ಮಲ್ಲಿಕಟ್ಟೆಯಲ್ಲಿರುವ ಪಕ್ಷದ ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಪಕ್ಷದ ಮುಖಂಡರಾದ ಕವಿತಾ ಸನಿಲ್, ಇಬ್ರಾಹೀಂ ಕೋಡಿಜಾಲ್, ಶಶಿಧರ್ ಹೆಗ್ಡೆ, ಮಮತಾ ಗಟ್ಟಿ ಮತ್ತಿತರರು ಭಾಗವಹಿಸಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News