ಉಪಹಾರ ಸೇವಿಸಿ ಅಸ್ವಸ್ಥರಾದ ಸಚಿವ ಶಿವಳ್ಳಿ ಆಸ್ಪತ್ರೆಗೆ ದಾಖಲು

Update: 2019-02-04 13:01 GMT

ಹುಬ್ಬಳ್ಳಿ, ಫೆ.04: ಕಾರ್ಯಕ್ರಮವೊಂದರಲ್ಲಿ ಉಪಹಾರ ಸೇವಿಸಿದ್ದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ.

ನಿನ್ನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಸಚಿವರು ವಾಪಸ್​ ಬರುವಾಗ ಮಾರ್ಗಮಧ್ಯೆ ವಾಂತಿ ಮಾಡಿಕೊಂಡಿದ್ದಾರೆ. ಇದರಿಂದ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ತಡರಾತ್ರಿ ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಉಪ್ಪಿಟ್ಟು ಸೇವಿಸಿದ್ದರಿಂದಲೇ ವಾಂತಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಅಲ್ಲದೇ, ಸಚಿವರ ಗನ್ ಮ್ಯಾನ್, ಆಪ್ತ ಕಾರ್ಯದರ್ಶಿ ಸೇರಿದಂತೆ ನಾಲ್ಕು ಜನರಿಗೆ ವಾಂತಿಯಾಗಿದ್ದು, ಉಪ್ಪಿಟ್ಟಿನಲ್ಲಿ ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಆದರೆ ಈ ಬಗ್ಗೆ ಯಾವುದೇ ವಿಚಾರವನ್ನು ಆಸ್ಪತ್ರೆಯ ವ್ಯೆದ್ಯರು ಸ್ಪಷ್ಟಪಡಿಸಿಲ್ಲ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News