ಪೊಲೀಸರ ಮೇಲೆ ಹಲ್ಲೆ ಆರೋಪ: ಗುಂಡಿಕ್ಕಿ ಆರೋಪಿಯ ಬಂಧನ

Update: 2019-02-05 16:08 GMT

ಬೆಂಗಳೂರು, ಫೆ.5: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ  ರೌಡಿಶೀಟರ್ ನ ಮೇಲೆ ಪಿಸ್ತೂಲ್ ನಿಂದ ಗುಂಡು ಹಾರಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಭರತ್ ಯಾನೆ ಸ್ಲಂ ಭರತ್ ಎಂಬಾತ ಬಂಧಿತ ರೌಡಿಶೀಟರ್ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಈತ ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದು, ಖಚಿತ ಮಾಹಿತಿ ಮೇರೆಗೆ ಕೆಂಗೇರಿ ಉಪನಗರದ ಕ್ಲಬ್ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿದ್ದರು. 

ಈ ವೇಳೆ ಶರಣಾಗುವಂತೆ ಸ್ಲಂ ಭರತ್ ಗೆ ಸಿಸಿಬಿ‌ ಪೊಲೀಸರು ಸೂಚಿಸಿದರು. ಆದರೆ, ಆತ ಸಿಸಿಬಿ ಪೇದೆ ಹನುಮೇಶ್ ಎಂಬುವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ,  ರೌಡಿಶೀಟರ್ ಭರತ್ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News