ಪ್ರಜಾಪ್ರಭುತ್ವದ ಬಗ್ಗೆ ಬಿಜೆಪಿಗೆ ಗೌರವವಿಲ್ಲ: ಸಚಿವ ಜಿ.ಟಿ.ದೇವೇಗೌಡ

Update: 2019-02-07 14:02 GMT

ಬೆಂಗಳೂರ, ಫೆ.7: ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಗೌರವವಿಲ್ಲ. ವಿರೋಧ ಪಕ್ಷದ ಸ್ಥಾನಕ್ಕೆ ಅವಮಾನ ಬರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಿಡಿಕಾರಿದರು.

ಸರಕಾರ ಎಲ್ಲಿ ಎಡವುತ್ತಿದೆ ಅದರ ಬಗ್ಗೆ ಪ್ರತಿಪಕ್ಷ ಬಿಜೆಪಿ ದನಿ ಎತ್ತಬೇಕು. ಆದರೆ, ಎಲ್ಲ ಶಾಸಕರನ್ನು ಕೂಡಿಹಾಕಿ ಮಾರುಕಟ್ಟೆಯಲ್ಲಿ ಹರಾಜು ಮಾಡುವ ರೀತಿಯಲ್ಲಿ ಶಾಸಕರಿಗೆ ಆಮಿಷವೊಡ್ಡುತ್ತಿದೆ. ಇದು ರಾಜ್ಯದ ಜನತೆಗೆ ಮಾಡುತ್ತಿರುವ ದ್ರೋಹವೆಂದು ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೇಮಕ ಮಾಡಿರುವ ರಾಜ್ಯಪಾಲರ ಭಾಷಣಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಇದು ಬಿಜೆಪಿ ನಾಯಕರು ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿರುವ ಮುನ್ಸೂಚನೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News