ಮರದಿಂದ ಬಿದ್ದು ಮೃತ್ಯು: ಸಾವಿನಲ್ಲೂ ಸಾರ್ಥಕತೆ ಮೆರೆದ ಕುತ್ತಾರಿನ ಗಣೇಶ್

Update: 2019-02-07 17:56 GMT

ಉಳ್ಳಾಲ, ಫೆ. 7: ಮರದಿಂದ ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ  ಕುತ್ತಾರು ಮುಂಡೋಳಿ ನಿವಾಸಿ ಗಣೇಶ್ ಕುಮಾರ್ (39) ಗುರುವಾರ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಗಣೇಶ್ ಕುಮಾರ್ ಅವರ ಕಣ್ಣನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ.

ಖಾಸಗಿ ಬಸ್ಸಿನಲ್ಲಿ ನಿರ್ವಾಹಕರಾಗಿ ದುಡಿಯುತ್ತಿದ್ದ ಗಣೇಶ್ ಕೆಲವು ವರ್ಷಗಳಿಂದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಫೆ.2ರಂದು ಮುನ್ನೂರು ಸುಭಾಷ್ ನಗರ ಸಮೀಪ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಮಧ್ಯಾಹ್ನ ಊಟದ ಸಮಯದಲ್ಲಿ ಕೆಲಸ ನಿರ್ವಹಿಸುವ ಸ್ಥಳದ ಎದುರು ಮಾವಿನ ಮರದಲ್ಲಿ ಮಾವಿನಕಾಯಿ ಕೀಳಲು ಮರ ಏರಿದ್ದರು. ಮರದ ಗೆಲ್ಲು ಮುರಿದು ಗಣೇಶ್  ಕಲ್ಲಿನ ಮೇಲೆ ಬಿದ್ದು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹಲವು ವರ್ಷಗಳಿಂದ ಖಾಸಗಿ ಬಸ್ಸುಗಳಲ್ಲಿ ನಿರ್ವಾಹಕರಾಗಿ ದುಡಿದಿದ್ದರು. ಕಳೆದ ಎರಡು ವರ್ಷಗಳಿಂದ ಸೆಂಟ್ರಿಂಗ್ ವೃತ್ತಿಯನ್ನು ನಿರ್ವಹಿಸುತ್ತಿದ್ದರು.

ಮೃತರಿಗೆ ಪತ್ನಿ, ಪುತ್ರಿ, ಪುತ್ರ ಹಾಗೂ ತಾಯಿ ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News