ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-02-08 16:31 GMT

ಬ್ರಹ್ಮಾವರ, ಫೆ.8: ಅನಾರೋಗ್ಯದಿಂದ ಬಳಲುತ್ತಿದ್ದ ಹಾವಂಜೆ ಗ್ರಾಮದ ಮುರುಳಿಧರ್ ರಾವ್ ಎಂಬವರ ಪತ್ನಿ ಜಯಂತಿ ಎಂ.(50) ಎಂಬವರು ಫೆ.8ರಂದು ಬೆಳಗಿನ ಜಾವ ಜೀವನದಲ್ಲಿ ಜಿಗುಪ್ಸೆಗೊಂಡು ನೆರೆಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವೈಯಕ್ತಿಕ ಕಾರಣದಿಂದ ಮನನೊಂದ ಮುಡಾರು ಗ್ರಾಮದ ಮಹಾಬಲ ದೇವಾಡಿಗ(75) ಎಂಬವರು ಫೆ.7ರಂದು ಬೆಳಗ್ಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News